ದಾವಣಗೆರೆ
ದಾವಣಗೆರೆ: ಡ್ರಗ್ಸ್ ಕೇಸ್ ನಲ್ಲಿ ಕ್ರಾಂಗ್ರೆಸ್ ಮುಖಂಡ‌, ಸಚಿವ ಮಲ್ಲಿಕಾರ್ಜುನ ಆಪ್ತ ಶಾಮನೂರು ವೇದಮೂರ್ತಿ ಸೇರಿ ನಾಲ್ವರ ಬಂಧನ

Editor m rajappa vyasagondanahalli
By shukradeshenews Kannada | online news portal |Kannada news online

By shukradeshenews | published on ಡಿಸೆಂಬರ್ 23_12_2025

ದಾವಣಗೆರೆ: ಡ್ರಗ್ಸ್ ಕೇಸ್ ನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ‌ ಎಸ್. ಎಸ್. ಮಲ್ಲಿಕಾರ್ಜುನ್ ಆಪ್ತ, ಕಾಂಗ್ರೆಸ್ ಮುಖಂಡ ಸೇರಿ ನಾಲ್ವರನ್ನು ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ. ಇನ್ನೂ ಮೂವರು ನಾಪತ್ತೆಯಾಗಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ಈ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಮಾಹಿತಿ ನೀಡಿದ್ದು, ಡ್ರಗ್ಸ್ ಕೇಸ್ ನಲ್ಲಿ ಶಾಮನೂರು ವೇದಮೂರ್ತಿ ಅಲಿಯಾಸ್ ಜಿ. ಎಸ್. ವೇದಮೂರ್ತಿ, ರಾಜಸ್ತಾನ ಮೂಲದ ರಾಮ್ ಸ್ವರೂಪ್, ದೊನಾರಮ್, ದಾವಣಗೆರೆ ಸಿದ್ದವೀರಪ್ಪ ಬಡಾವಣೆಯ ದೇವಕಿಶನ್ ಬಂಧಿತ ಆರೋಪಿಗಳು. ಇನ್ನು ಮೂವರು ತಪ್ಪಿಸಿಕೊಂಡಿದ್ದು, ಅವರ ಪತ್ತೆ ಕಾರ್ಯಾಚರಣೆ ನಡೆಸುವುದಾಗಿ ತಿಳಿಸಿದರು.

ಖಚಿತ ಮಾಹಿತಿ ಮೇರೆಗೆ ದಾವಣಗೆರೆ ವಿದ್ಯಾನಗರ ಪೊಲೀಸರು ದಾಳಿ ನಡೆಸಿದ್ದು, ದಾಳಿ ವೇಳೆ 290 ಗ್ರಾಂ ಸಿಂಥೆಟಿಕ್ ಡ್ರಗ್ಸ್, 90 ಗ್ರಾಂ ಬ್ರೌನ್ ಶುಗರ್ ಸೇರಿದಂತೆ ಲಕ್ಷಾಂತರ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ರಿಯಲ್ ಎಸ್ಟೇಟ್ ಉದ್ಯಮದಲ್ಲಿದ್ದ ಶಾಮನೂರು ವೇದಮೂರ್ತಿ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದರು. ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಮತ್ತು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಅವರ ಆಪ್ತ ವಲಯದಲ್ಲಿ ಕಾಣಿಸಿಕೊಂಡಿದ್ದ ವೇದಮೂರ್ತಿ ಡ್ರಗ್ಸ್ ದಂಧೆಯಲ್ಲಿ ಭಾಗಿಯಾಗಿರುವುದು ಕಾಂಗ್ರೆಸ್ ಪಕ್ಷದ ನಾಯಕರಿಗೆ ಶಾಕ್ ಎನ್ನುವಂತಾಗಿದೆ.

ರಾಜಸ್ತಾನ ಮೂಲದ ಆರೋಪಿಗಳಿಂದ ಡ್ರಗ್ಸ್ ತರಿಸಿ ಉದ್ಯಮಿಗಳು ಮತ್ತು ವಿದ್ಯಾರ್ಥಿಗಳಿಗೆ ಸರಬರಾಜು ಮಾಡುತ್ತಿದ್ದ ಆರೋಪವೂ ಶಾಮನೂರು ವೇದಮೂರ್ತಿ ಮೇಲಿದ್ದು, ಡ್ರಗ್ಸ್ ಸೇವನೆ ವೇಳೆ ಸಿಕ್ಕಿಬಿದ್ದಿದ್ದಾರೆ.

Leave a Reply

Your email address will not be published. Required fields are marked *

You missed

error: Content is protected !!